Friday, July 4, 2025
spot_imgspot_img
spot_imgspot_img

ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ದುರಂತ

- Advertisement -
- Advertisement -

ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಇಂದು ತಿರುವನಂತಪುರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ತಿರುವನಂತಪುರದಿಂದ ಬೆಳಿಗ್ಗೆ 7.52ಕ್ಕೆ ಟೇಕ್‌ ಆಫ್‌ ಆಗಿತ್ತು. ಆದರೆ ವಿಮಾನದ ಕಿಟಕಿಯೊಂದರಲ್ಲಿ ಬಿರುಕು ಉಂಟಾಗಿದ್ದರಿಂದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಕೊರೊನಾ ಸೋಂಕಿನಿಂದಾಗಿ ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧ ಹೇರಿದ್ದರಿಂದ ವಿಮಾನದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಬದಲಾಗಿ ವಿಮಾನದಲ್ಲಿ ಸರಕುಗಳು ಮತ್ತು ಎಂಟು ಸಿಬ್ಬಂದಿ ಮಾತ್ರ ಇದ್ದರು ಅಂತ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!