- Advertisement -
- Advertisement -
ಬ್ರಹ್ಮಾವರ: ಹೇರೂರು ಸೇತುವೆಯ ಮೇಲೆ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ಕು ಜನರು ಗಾಯಗೊಂಡಿದ್ದಾರೆ. ಬೆಳಿಗ್ಗೆ 7.14 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಗೊಂಡವರ ಗುರುತುಗಳು ಇನ್ನೂ ತಿಳಿದಿಲ್ಲ.
ಮಂಗಳೂರಿನಿಂದ ಕುಂದಾಪುರಕ್ಕೆ ಸುಮಾರು ನಾಲ್ಕೈದು ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರು ಶೂಟಿಂಗ್’ಗಾಗಿ ಕುಂದಾಪುರ ಕಡೆಗೆ ಹೋಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಿಳೆಯೊಬ್ಬಳು ಕಾರನ್ನು ಚಲಾಯಿಸುತ್ತಿದ್ದಳು. ಆಕೆ ರಸ್ತೆಯ ಗುಂಡಿ ತಪ್ಪಿಸಲು ಪ್ರಯತ್ನಿಸಿ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಾಯಗೊಂಡ ಕನಿಷ್ಠ ನಾಲ್ಕು ಜನರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು. ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -