- Advertisement -
- Advertisement -

ಶಿವಮೊಗ್ಗ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಶಿವಮೊಗ್ಗದಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿ ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಭದ್ರಾವತಿ ಕಡೆಗೆ ಗಾಂಜಾ ಸಾಗಾಣಿಕೆ ಮಾಡಲಾಗ್ತಿತ್ತು. ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಗೋಪಿನಾಥ, ಭರತ್, ಸಾಗರ್ ಎಂಬವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಅಂದಾಜು 2 ಲಕ್ಷ 30 ಸಾವಿರ ಮೌಲ್ಯದ 23 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಮೂರು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.





- Advertisement -