Saturday, July 5, 2025
spot_imgspot_img
spot_imgspot_img

ತೆಲಂಗಾಣದ ರಾಜ್ಯಪಾಲರಾಗಿ ಯಡಿಯೂರಪ್ಪ ನೇಮಕ ಬಹುತೇಕ ಫಿಕ್ಸ್..!

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆಲಂಗಾಣದಲ್ಲಿ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆಯಿದೆ ಎಂಬ ಮಾಹಿ ಹೊರಬಿದ್ದಿದೆ. ಈಗೀನ ರಾಜ್ಯಪಾಲೆಯಾಗಿದ್ದ ತಮಿಳೈ ಸೌಂದರ್ಯರಾಜನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಈ ಹಿನ್ನಲೆ ತೆರವುಗೊಳಿಸಲಾಗುವ ಸ್ಥಾನಕ್ಕೆ ಬಿಎಸ್‌ವೈ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಹೈಕಮಾಂಡ್ ಮೂಲಗಳ ಪ್ರಕಾರ, ಯಡಿಯೂರಪ್ಪ ಮಾಲ್ಡೀವ್ಸ್ ರಜೆಯಿಂದ ಹಿಂದಿರುಗಿದ ತಕ್ಷಣ ಕೇಂದ್ರ ಸರ್ಕಾರವು ಅವರನ್ನು ರಾಜ್ಯಪಾಲರನ್ನಾಗಿ ನೇಮಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕೇಂದ್ರ ಸರ್ಕಾರವು ನೆರೆಯ ರಾಜ್ಯದಲ್ಲಿ ಅವರನ್ನು ರಾಜ್ಯಪಾಲರನ್ನಾಗಿ ಮಾಡಲು ಯೋಜಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!