- Advertisement -
- Advertisement -
ರಾಮನಗರ: ‘ಲವ್ ಯು ರಚ್ಚು’ ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದಲ್ಲಿ ಚಿತ್ರದ ಹೀರೋ ಅಜಯ್ ರಾವ್ಗೆ ಬಂಧನದ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ರಾಮನಗರ ಮೂರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನಲ್ಲಿ ಅಜಯ್ ರಾವ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಿಡದಿ ಠಾಣೆ ಪೊಲೀಸರು ದುರಂತ ಪ್ರಕರಣ ಸಂಬಂಧ ಆಗಸ್ಟ್ 26 ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ.
ವಿಚಾರಣೆಗೆ ಹಾಜರಾಗುವ ಮುನ್ನವೇ ಅಜಯ್ ರಾವ್ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಚಿತ್ರದ ಹೀರೋಯಿನ್ ರಚಿತಾ ರಾಮ್ ಅವರು ಬಿಡದಿ ಠಾಣೆಗೆ ಭೇಟಿ ನೀಡಿ ಹೇಳಿಕೆಯನ್ನ ನೀಡಿದ್ದಾರೆ.
ಆಗಸ್ಟ್ 9 ರಂದು ಬಿಡದಿಯ ಜ್ಯೋಗಯ್ಯನಪಾಳ್ಯ ಗ್ರಾಮದಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಅವಘಡ ಸಂಭವಿಸಿತ್ತು. ವಿದ್ಯುತ್ ಶಾಕ್ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಯಾವುದೇ ಅನುಮತಿ ಪಡೆಯದೇ ಚಿತ್ರೀಕರಣ ನಡೆಸುತ್ತಿದ್ದರು ಎನ್ನಲಾಗಿದೆ.
- Advertisement -