Sunday, June 29, 2025
spot_imgspot_img
spot_imgspot_img

ಮೈಸೂರು: ಶೂಟೌಟ್ ಪ್ರಕರಣ; ಆರೋಪಿಗಳ ಪತ್ತೆ ಮಾಹಿತಿ ನೀಡಿದ್ದಲ್ಲಿ 5 ಲಕ್ಷ ನಗದು ಬಹುಮಾನ

- Advertisement -
- Advertisement -

ಮೈಸೂರು: ವಿದ್ಯಾರಣ್ಯಪುರದ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಖದೀಮರು ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ವೇಳೆ ತಪ್ಪಿಸಿಕೊಳ್ಳಲು ಪರಾರಿಯಾಗುತ್ತಿದ್ದಾಗ ಅಪರಾಧಿಗಳು ಗುಂಡು ಹಾರಿಸಿದ್ದು, ಒಬ್ಬ ಅಮಾಯಕನ ಸಾವಿಗೆ ಕಾರಣವಾಗಿದ್ದಾರೆ.

ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಕೈಗೆತ್ತಿಕೊಂಡಿದ್ದಾರೆ. ಪೊಲೀಸರು ವಿವಿಧ ತಂಡಗಳನ್ನು ರಚಿಸಿದ್ದು, ಅಪರಾಧಿಗಳನ್ನು ಶೀಘ್ರವಾಗಿ ಬಂಧಿಸುವುದಾಗಿ ಖಾತ್ರಿಪಡಿಸಿದ್ದಾರೆ. ಈ ನಡುವೆ 25 ಅಧಿಕಾರಿಗಳು ಮತ್ತು 80 ಸಿಬ್ಬಂದಿ ಈ ಕೆಲಸಕ್ಕೆ ಸಂಪೂರ್ಣವಾಗಿ ಸಮರ್ಪಿತರಾಗಿದ್ದಾರೆ. ಆದಾಗ್ಯೂ ಸಾರ್ವಜನಿಕ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲಿ ಪೊಲೀಸ್ ಇಲಾಖೆಯು ರೂ .5 ಲಕ್ಷ ಬಹುಮಾನವನ್ನು ಘೋಷಿಸಿದೆ. ಮಾಹಿತಿ ನೀಡಿದವರ ಅವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

9480802200, 9480802203, 9480802264 ಈ ನಂಬರ್‌ಗೆ ದಿನದ ಯಾವುದೇ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಬಹುದು.

- Advertisement -

Related news

error: Content is protected !!