- Advertisement -
- Advertisement -
ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಚರಂಡಿಗೆ ಬಿದ್ದ ಘಟನೆ ನಿನ್ನೆ ತಡರಾತ್ರಿ ಕಡಬದ ನೀರಾಜೆ ಕ್ರಾಸ್ ಸಮೀಪ ನಡೆದಿದೆ. ಪರಿಣಾಮ ಚಾಲಕ ಗಾಯಗೊಂಡಿದ್ದಾನೆ. ಕಾರು ಜಖಂಗೊಂಡಿದೆ.
102 ನೆಕ್ಕಿಲಾಡಿ ಗ್ರಾಮದ ಡೆಪ್ಪುಣಿ ನಿವಾಸಿ ಕುಶಾಲಪ್ಪ ಗಾಯಗೊಂಡ ಚಾಲಕ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯ ಎಡ ಬದಿಗೆ ಬಿದ್ದಿದೆ. ಘಟನೆಯಲ್ಲಿ ಚಾಲಕನ ತಲೆಗೆ ಗಾಯವಾಗಿದ್ದು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -