- Advertisement -
- Advertisement -


ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ವಿಜಯಪುರದವನು ಜಗನ್ನಾಥ್(34) ಎನ್ನಲಾಗಿದೆ.

ಮ್ಯಾಟ್ರಿಮೋನಿಯಲ್ಲಿ (Matrimony) ಮದುವೆಯಾಗುವುದಾಗಿ ನಂಬಿಸಿ ಹಲವಾರು ಮಹಿಳೆಯರಿಗೆ ವಂಚಿಸುತ್ತಿದ್ದ ಈತ ತಾನು ಸಿವಿಲ್ ಇಂಜಿನಿಯರ್ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದ. ಮೊದಲೆರಡು ಬಾರಿ ಯುವತಿಯರನ್ನ ಭೇಟಿಯಾಗಿ ಮದುವೆಯಾಗುವುದಾಗಿ ನಂಬಿಸುತ್ತಿದ್ದ. ನಂತರ ಬೇರೆ ಬೇರೆ ಕಾರಣ ಹೇಳಿ ಹಣ ವಸೂಲಿ ಮಾಡುತ್ತಿದ್ದ.
30 ವರ್ಷ ಮೇಲ್ಪಟ್ಟ ವಿಚ್ಛೇದಿತ ಮಹಿಳೆಯರನ್ನೇ ಈತ ಟಾರ್ಗೆಟ್ ಮಾಡುತ್ತಿದ್ದ. ಈವರೆಗೆ ಸುಮಾರು 10 ಮಹಿಳೆಯರಿಗೆ ಆರೋಪಿ ವಂಚಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿ ವಿರುದ್ಧ ಇದುವರೆಗೆ ಮೂರು ಯುವತಿಯರು ದೂರು ನೀಡಿದ್ದಾರೆ. ಬನಶಂಕರಿ, ಹೆಣ್ಣೂರು, ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈತನನ್ನು ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.




- Advertisement -