![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2021/09/WhatsApp-Image-2021-09-01-at-5.38.26-PM-819x1024.jpeg)
![driving](https://vtvvitla.com/wp-content/uploads/2021/02/WhatsApp-Image-2021-01-08-at-3.24.45-PM.jpeg)
ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
![](https://vtvvitla.com/wp-content/uploads/2020/09/ad-2-1-1024x513.jpg)
ಜಾತಿಗಣತಿ ವರದಿಗೆ 170 ಕೋಟಿ ರೂಪಾಯಿ ಖರ್ಚಾಗಿದ್ದು, ಸರ್ಕಾರ ವರದಿ ಬಿಡುಗಡೆ ಮಾಡಲು ಮುಕ್ತ ಮನಸ್ಸಿನಿಂದ ಸಿದ್ಧವಿದೆ ಎಂದು ಬೆಂಗಳೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಳೆದ ಏ. 19ರಂದು ಅತಿ ಹಿಂದುಳಿದ ವರ್ಗಗಳ ಸಭೆ ನಡೆಸಿದ ಬಳಿದ ಸ್ಪಷ್ಟಪಡಿಸಿದ್ದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತಾರೆಂದು ತಿಳಿದಿದ್ದೆವು. ಆದರೆ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡಲಿಲ್ಲ. ಈಗ ಜಯಪ್ರಕಾಶ್ ಹೆಗಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಅವರ ಸುಪರ್ದಿಯಲ್ಲಿಯೇ ಜಾತಿಗಣತಿ ವರದಿಯ ಕಡತಗಳಿವೆ. ಆಯೋಗ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಬೇಕಾಗಿದೆ. ಆಯೊಗ ಸರ್ಕಾರಕ್ಕೆ ವರದಿ ನೀಡಿದರೆ ಅದು ಬಿಡುಗಡೆಯಾದಂತೆಯೇ ಲೆಕ್ಕ. ಆದರೆ ಸರ್ಕಾರಕ್ಕೆ ವರದಿ ಸಲ್ಲಿಸಲು ಕಡತದಲ್ಲಿ ಸಮಸ್ಯೆ ಇದೆ ಎಂಬ ಮಾಹಿತಿಯಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದರು.
![](https://vtvvitla.com/wp-content/uploads/2021/09/WhatsApp-Image-2021-09-11-at-4.15.06-PM-714x1024.jpeg)
![](https://vtvvitla.com/wp-content/uploads/2021/04/janapriya-ad-1-1024x597.jpg)
![](https://vtvvitla.com/wp-content/uploads/2020/10/add-1-1024x638.jpeg)
![](https://vtvvitla.com/wp-content/uploads/2021/05/DATTA-KRIPA-1024x299.jpg)
![](https://vtvvitla.com/wp-content/uploads/2021/05/yashpal-1024x299.jpg)