- Advertisement -
- Advertisement -


ಮೈಸೂರು: ತಾಯಿ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮೃತ ಯುವಕ ಅರ್ಜುನ್ (29) ಎನ್ನಲಾಗಿದೆ.
ಸೆ. 15ರಂದು ತಾಯಿ ಸುಜಾತ ಹೃದಯಾಘಾತದಿಂದ ಮೃತಪಟ್ಟಿದ್ದರು. ತಾಯಿಯ ಅಂತ್ಯಕ್ರಿಯೆ ಬಳಿಕ ಅರ್ಜುನ್ ನಾಪತ್ತೆಯಾಗಿದ್ದು, ಇಂದು ಅರಸನಕೆರೆ ಮುಖ್ಯ ಸೇತುವೆ ಬಳಿ ಆತನ ಮೃತದೇಹ ಪತ್ತೆಯಾಗಿದೆ. ತಾಯಿ ಅಗಲಿಕೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


- Advertisement -








