- Advertisement -
- Advertisement -
ಮೈಸೂರು: ಸಾಂಸ್ಕೃತಿಕ ನಗರದಲ್ಲಿ ಇತ್ತೀಚಿಗೆ ನಡೆದ ಸಾಮೂಹಿಕ ಅತ್ಯಾಚರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೊನೆಗೂ ಹೇಳಿಕೆ ದಾಖಲಿಸಿದ್ದಾರೆ.
ಪ್ರಕರಣ ನಡೆದು 28 ದಿನಗಳ ಬಳಿಕ ಸಂತ್ರಸ್ತೆ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾಳೆ. ಮೈಸೂರಿನ ಮೂರನೇ ಜೆಎಂಎಫ್ಸಿ ಕೋರ್ಟ್ಗೆ ಹಾಜರಾದ ಯುವತಿ ಜಡ್ಜ್, ತನಿಖಾಧಿಕಾರಿ ಸಮ್ಮುಖದಲ್ಲಿ ಹೇಳಿಕೆ ದಾಖಲು ಮಾಡಿದ್ದು 168 ಹೇಳಿಕೆಗಳನ್ನು ದಾಖಲಿಸಿದ್ದಾಳೆ ಎನ್ನಲಾಗಿದೆ. ಸದ್ಯ ಸಂತ್ರಸ್ಥ ಯುವತಿಯ ಹೇಳಿಕೆ ಮುಚ್ಚಿದ ಲಕೋಟೆಯಲ್ಲಿ ಭದ್ರ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
- Advertisement -