- Advertisement -
- Advertisement -
ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ. ಮೃತ ಬಾಲಕ ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು ಕುಂಬಾರ (7)ಎನ್ನಲಾಗಿದೆ.
ಎನ್.ಜಿ.ಓ. ಕಾಲೋನಿಯಲ್ಲಿರುವ ಹನುಮಾನ್ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. ಆಟವಾಡುತ್ತಿದ್ದ ಬಾಲಕ ಆಕಸ್ಮಾತಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂ ದು ತಿಳಿದುಬಂದಿದೆ.
- Advertisement -