ವಿಟ್ಲ: ಭಾರತೀಯ ಜನತಾ ಪಾರ್ಟಿ ಇದರ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದ್ಯಂತ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆಯ ಕಾರ್ಯಕ್ರಮ ನಡೆಯುತ್ತಿದೆ. ಇದರ ಅಂಗವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ವಿವಿಧ ಬೂತ್ಗಳ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಸುವ ಕಾರ್ಯಕ್ರಮ ನಡೆಯಿತು.
ಪುತ್ತೂರು ವಿಧಾನಸಭಾ ಕ್ಷೆತ್ರದ ಶಾಸಕ ಸಂಜೀವ ಮಠಂದೂರು ಅವರು ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ 18ನೇ ಬೂತ್ ಮಿತ್ತೂರು ದರ್ಬೆ ಏಮಾಜೆ ಇದರ ಅಧ್ಯಕ್ಷ ಆನಂದ ನಾಯ್ಕ್, 19 ನೇ ಬೂತ್ ಬೀಡಿನಮಜಲು ಇದರ ಅಧ್ಯಕ್ಷ ಮೋಹನ್ ಶೆಟ್ಟಿ, 20 ನೇ ಬೂತ್ ಸೂರ್ಯ ಇದರ ಅಧ್ಯಕ್ಷ ಪ್ರವೀಣ್ ಕುಮಾರ್, 21ನೇ ಬೂತ್ ಇದರ ಅಧ್ಯಕ್ಷ ಕೃಷ್ಣಪ್ಪ ಗೌಡ ವಡ್ಯರ್ಪೆ ಇವರ ಮನೆಗಳಿಗೆ ತೆರಳಿ ನಾಮಫಲಕ ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಬೂತ್ಗಳಲ್ಲಿ ಶಾಸಕರು ಮನವಿಯನ್ನು ಸ್ವೀಕಾರ ಮಾಡಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಜಗನ್ನೀವಾಸ ರಾವ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್.ಸಿ ನಾರಾಯಾಣ, ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ಬೂಡಿಯಾರ್, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ದಯಾನಂದ ಶೆಟ್ಟಿ ಉಜಿರೆಮಾರು ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.