- Advertisement -
- Advertisement -
ಬ್ರಹ್ಮಾವರ: ಅಪರಿಚಿತ ವ್ಯಕ್ತಿಯೊಬ್ಬರ ತಲೆಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾದ ಘಟನೆ ಬ್ರಹ್ಮಾವರದ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಬಳಿಯ ಹಡ್ಕದಲ್ಲಿ ನಡೆದಿದೆ.
ಸ್ಥಳೀಯರಾದ ಸುದರ್ಶನ್ ಎಂಬುವವರ ಮಾಲೀಕತ್ವದ ಹಾಡಿಯಲ್ಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರು ತರಗೆಲೆ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸುತ್ತಿದ್ದಾಗ ಅವರಿಗೆ ವ್ಯಕ್ತಿಯೊಬ್ಬರ ತಲೆಬುರುಡೆ, ಕೈ ಕಾಲುಗಳ ಮೂಳೆಗಳು ಮತ್ತು ಬಟ್ಟೆಗಳು ಕಂಡುಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಕೋಟ ಠಾಣಾಧಿಕಾರಿ ಸಂತೋಷ್ ಬಿ.ಪಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
- Advertisement -