Tuesday, July 1, 2025
spot_imgspot_img
spot_imgspot_img

ಕಾಂಗ್ರೆಸ್​ ಶಾಸಕನ ಪುತ್ರ ಗುಂಡು ಹಾರಿಸಿ ಆತ್ಮಹತ್ಯೆ!

- Advertisement -
- Advertisement -

ಕಾಂಗ್ರೆಸ್​ ಶಾಸಕನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ವೈಭವ್‌ (16) ಎನ್ನಲಾಗಿದೆ.

ಈತ ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್​ ಯಾದವ್​ ಅವರ ಮಗ. ವೈಭವ್‌ ಸ್ನಾನದ ಕೋಣೆಗೆ ಹೋಗಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ ಎನ್ನಲಾಗಿದೆ. ಗುಂಡಿನ ಶಬ್ದ ಕೇಳುತ್ತಲೇ ಧಾವಿಸಿದ ಕುಟುಂಬಸ್ಥರು ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಿದರೂ ಆತ ಅದಾಗಲೇ ಮೃತಪಟ್ಟಿದ್ದ.

ಆತ್ಮಹತ್ಯೆಯ ಮುನ್ನ ತನ್ನೆಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದ ವೈಭವ್‌. ಇಷ್ಟು ದಿನ ತನ್ನ ಜತೆಗೆ ಕಳೆದಿರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ಹೇಳಿದ್ದಾನೆ. ಕೊನೆಗೆ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ, ಪೊಲೀಸರು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!