- Advertisement -
- Advertisement -
ಮಂಗಳೂರು: ಇಲ್ಲಿನ ಕಂಕನಾಡಿ ಬಳಿ ಪಾರ್ಕಿಂಗ್ ಮಾಡಿದ ಕಾರಿನಲ್ಲಿ ಶವವೊಂದು ಪತ್ತೆಯಾದ ಘಟನೆ ನ. 12 ರಂದು ನಡೆದಿದೆ. ಈ ಘಟನೆಯಿಂದ ಜನರಲ್ಲಿ ಆತಂಕ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ (44)ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.
ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು, ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು ಕಂಡುಬಂದಿತ್ತು. ಪೊಲೀಸರು ಸ್ಥಳಕ್ಕೆ ಅಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -