- Advertisement -
- Advertisement -


ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ವಕೀಲ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನ.22ರ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ಪರ್ತಕರ್ತ ಸುಖ್ ಪಾಲ್ ಪೊಳಲಿ ಎನ್ನಲಾಗಿದೆ. ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ನಿನ್ನೆ ಸಂಜೆ ರಾಡ್ ನಿಂದ ಸುಖ್ ಪಾಲ್ ಮೇಲೆ ಹಲ್ಲೆ ನಡೆಸಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.


- Advertisement -








