- Advertisement -
- Advertisement -


ಮಂಗಳೂರು: ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಸೆಲ್ಪಿ ತೆಗೆಯಲು ಹೋಗಿ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬನಿಗೆ ಸುಟ್ಟಗಾಯಗಳಾದ ಘಟನೆ ನಡೆದಿದೆ.

ವಿದ್ಯುತ್ ಅಘಾತಕ್ಕೊಳಗಾದವನು ಸಲಾನ್ ಪಾರಸ್ (21) ಎನ್ನಲಾಗಿದೆ. ಈತ ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿಯ ಅಗರಮೇಲು ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ನಿಂತು ಸೆಲ್ಪಿ ತೆಗೆಯಲು ಹೋಗಿದ್ದ ವೇಳೆ ಹೈ ವೋಲ್ಟೇಜ್ ತಂತಿ ತಗುಲಿ ದೇಹ ಭಾಗಶಃ ಸುಟ್ಟು ಹೋಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


- Advertisement -








