- Advertisement -
- Advertisement -
ವಿಟ್ಲ: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಚುನಾವಣಾ ಕ್ಷೇತ್ರದ ಎರಡು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ದ.ಕ.ದಲ್ಲಿ 3,535 ಹಾಗೂ ಉಡುಪಿ ಜಿಲ್ಲೆಯಲ್ಲಿ 2,505 ಸೇರಿ ಒಟ್ಟು 6,040 ಮತದಾರರು ಮತ ಚಲಾಯಿಸಲಿದ್ದಾರೆ.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ನ ಮಂಜುನಾಥ ಭಂಡಾರಿ, ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ದ ಶಾಫಿ ಕೆ. ಕಣದಲ್ಲಿದ್ದು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಇಡ್ಕಿದು ಕುಳ ಗ್ರಾಮ ಪಂಚಾಯತ್ ನಲ್ಲಿ 19 ಮಂದಿ ಮತದಾರರಿದ್ದು ಎಲ್ಲ ಮತದಾರರು ಆಗಮಿಸಿ ಮತ ಚಲಾವಣೆ ಮಾಡಿದರು. ಇಡ್ಕಿದು ಕುಳ ಪಂಚಾಯತ್ ಸದಸ್ಯರು ವಿಧಾನಪರಿಷತ್ ಚುನಾವಣೆಗೆ ಮತದಾನವನ್ನು ಮಾಡಿದರು.
- Advertisement -