Sunday, June 29, 2025
spot_imgspot_img
spot_imgspot_img

ಶಿರೂರಿನಲ್ಲಿ ಟ್ಯಾಂಕರ್‌ಗಳಿಂದ ಡೀಸೆಲ್ ಕದಿಯುತ್ತಿದ್ದ ಐದು ಮಂದಿಯ ಬಂಧನ.!

- Advertisement -
- Advertisement -

vtv vitla
vtv vitla

ಬೈಂದೂರು : ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಎಂಬಲ್ಲಿ ಡಿ.10ರಂದು ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಡಿಕೇರಿಯ ಮಾರ್ದಾಳ ನಿವಾಸಿ ಕಿರಣ್(32), ಪುತ್ತೂರಿನ ಮಹಮ್ಮದ್ ಮುಸ್ತಾಫ್(34), ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯವಾರಾದ ಅಶೋಕ್(30), ರೂಪೇಶ್ ಪೂಜಾರಿ(27) ಹಾಗೂ ಶಿರೂರು ಅಳ್ವೆಗದ್ದೆಯ ಮೋಹನ ಪೂಜಾರಿ(42). ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ನೇತೃತ್ವದ ತಂಡದ ಕಾರ್ಯಾಚರಣೆಯಲ್ಲಿ ಡೀಸೆಲ್ ಸಾಗಾಟದ ಟ್ಯಾಂಕರ್‌ನಿಂದ ಡಿಸೇಲ್ ಕಳವು ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ‌ ಆರೋಪಿಗಳನ್ನು ಬಂಧಿಸಿದೆ.

ಆರೋಪಿಗಳು ಪ್ರತಿ ಲಾರಿಯ ಡಿಸೇಲ್ ಟ್ಯಾಂಕಿನಿಂದ 15 ರಿಂದ 20 ಲೀಟರ್ ಡಿಸೇಲ್ ಕಳವು ಮಾಡಿ ಶಿರೂರಿನ ಮೋಹನ ಪೂಜಾರಿಯವರಿಗೆ ನೀಡುತ್ತಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳಿಂದ ಒಟ್ಟು 4 ಕ್ಯಾನ್ ಗಳಲ್ಲಿನ 6500ರೂ. ಮೌಲ್ಯದ ಸುಮಾರು 73 ಲೀಟರ್ ಡೀಸೆಲ್ ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!