- Advertisement -
- Advertisement -
ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆ ಬಳಿಯ ದುಬೈ ಮಾರ್ಕೆಟ್’ನ ನೆಲ ಅಂತಸ್ತಿನ ಎರಡು ಅಂಗಡಿಗಳು ತಡರಾತ್ರಿ ವೇಳೆ ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ದುರ್ಘಟನೆ ಸಂಭವಿಸಿದ 3.20ರ ಸುಮಾರಿಗೆ ಸ್ಥಳಕ್ಕೆ ದೌಡಾಯಿಸಿದ ಪಾಂಡೇಶ್ವರ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆಲಹೊತ್ತಿ ನಲ್ಲಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಸಹ ಎರಡು ಅಂಗಡಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿತ್ತು.
ಘಟನೆಯಲ್ಲಿ ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮವಾಗಿದೆ. ಶಾರ್ಟ್ ಸರ್ಕಿಟ್’ನಿಂದ ಈ ಅವಘಡ ಸಂಭವಿಸಿರಬಹುದೆ0ದು ಶಂಕಿಸಲಾಗಿದೆ. ಅಂಗಡಿಗಳ ಮಾಲಕರು ಯಾರೆಂದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಇನ್ನಷ್ಟೇ ಮಾಹಿತಿ ದೊರಕಬೇಕಿದೆ.
- Advertisement -