- Advertisement -
- Advertisement -
ವಿಟ್ಲ: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2ರ ಅನ್ವಯ ಬಿ.ಪಿ.ಎಲ್. ಕಾರ್ಡ್’ದಾರರಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಣೆಯು ವಿಟ್ಲದ ಅಕ್ಷಯ ಸಮುದಾಯ ಭವನದಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜಾ ರಾಧಕೃಷ್ಣ ಆಳ್ವ, ಸಾಯಿಗಣೇಶ್ ಇಂಡೇನ್ ಗ್ಯಾಸ್ ಸರ್ವೀಸಸ್ ಇದರ ಸತೀಶ್ ಕುಮಾರ್ ಆಳ್ವ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್ ಗೌಡ, ವಿಟ್ಲ ಲಯನ್ಸ್ ಸಿಟಿ ಸಂದೇಶ್ ಶೆಟ್ಟಿ, ಸುದರ್ಶನ್ ಪಡಿಯಾರ್, ಶಿವಕುಮಾರ್, ರಾಧಕೃಷ್ಣ ರೈ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
- Advertisement -