ಮೈಸೂರು: ತಾಯಿಯೊಬ್ಬಳು ತನ್ನ ಹೆತ್ತ ಮಗನನ್ನು ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬದನೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಗು ಶ್ರೀನಿವಾಸ್ (4) ಎಂದು ಗುರುತಿಸಲಾಗಿದೆ.
ತಾಯಿ ಭವಾನಿ ಮಾನಸಿಕ ಆಸ್ತರಾಗಿದ್ದು, ಪುತ್ರ ಶ್ರೀನಿವಾಸ್ನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ, ಪತಿ ಶಂಕರ್ ಮನೆಯಲ್ಲಿ ಇಲ್ಲದಿದ್ದಾಗ ಭವಾನಿ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಎಚ್.ಡಿ.ಕೋಟೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿತ್ತು. ಭವಾನಿ ಮೈ ಮೇಲೆ ದೇವರು ಬರುತ್ತದೆ. ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ ಗಂಡನೊ0ದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು, ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.
ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನು ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲಕೈದು ಬಾರಿ ಹೊಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ ಎಂದು ತಿಳಿದುಬಂದಿದೆ.