- Advertisement -
- Advertisement -

ಮಂಗಳೂರು: ಕಾರಿನ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಮಂಗಳೂರಿನ ಮಂಗಳಾದೇವಿ ಬಳಿ ನಡೆದಿದೆ. ಶರೀಫ್ ಅವರು ಮೃತಪಟ್ಟ ದುರ್ದೈವಿ ಎನ್ನಲಾಗಿದೆ.

ಕಾರು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿ ಕಾರು ನಿಯಂತ್ರಣ ತಪ್ಪಿದೆ. ಕಾರು ಬೈಕ್, ಟೆಂಪೋ ಹಾಗೂ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.


- Advertisement -








