ಶ್ರೀನಗರ: ದೇಶದೆಲ್ಲಡೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ದತೆ ನಡೆಯುತ್ತಿರುವ ಹೊಸ್ತಿಲಲ್ಲೇ ಉಗ್ರರ ಉಪಟಳ ಜೋರಾಗಿದೆ. ಶುಕ್ರವಾರ ಜಮ್ಮು-ಕಾಶ್ಮೀರದ ನೌಗಮ್ ಬೈಪಾಸ್ ಬಳಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮೂವರು ಸಿಬ್ಬಂದಿಗೆ ಗಾಯಗಳಾಗಿವೆ.
ಶ್ರೀನಗರ ನಗರದ ಹೊರಲಯದಲ್ಲಿರುವ ಪೊಲೀಸ್ ಸಿಬ್ಬಂದಿ ಮೇಲೆ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದಾರೆ.
3 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರಲ್ಲಿ 02 ಮಂದಿ ಹುತಾತ್ಮರಾದರು. ಪ್ರದೇಶವನ್ನು ನಮ್ಮ ತಂಡ ಸುತ್ತುವರಿದಿದೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
#UPDATE Two Police personnel lost their lives and one injured in the firing by terrorists in Nowgam. Area cordoned off. More details awaited. (visuals deferred by unspecified time). #JammuAndKashmir https://t.co/8oecUfOKqv pic.twitter.com/l9xEG35vUS
— ANI (@ANI) August 14, 2020
ಇದಕ್ಕೂ ಮುನ್ನ ಗುರುವಾರ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೊರಾದಲ್ಲಿ ಭದ್ರತಾ ಪಡೆಗಳು ಮೂರು ಭಯೋತ್ಪಾದಕರ ಅಡಗುತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ದಾಳಿಯ ಸಂದರ್ಭದಲ್ಲಿ ಪತ್ತೆ ಹಚ್ಚಿದ್ದಾರೆ.