Sunday, June 29, 2025
spot_imgspot_img
spot_imgspot_img

ಮಂಗಳೂರು: ಹಿಜಾಬ್ ವಿವಾದ; ಮುಸ್ಲಿಂ ವಿದ್ಯಾರ್ಥಿನಿಗೆ ಜೀವಬೆದರಿಕೆ ಹಾಕಿದ ಇನ್ಸ್‌ಪೆಕ್ಟರ್‌ .!

- Advertisement -
- Advertisement -

ಮಂಗಳೂರು: ಮಂಗಳೂರಿನ ದಯಾನಂದ ಪೈ-ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ನಗರದ ಬಂದರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌  ಜೀವಬೆದರಿಕೆ ಹಾಕಿದ್ದಾರೆಂದು ಸಂತ್ರಸ್ತ ವಿದ್ಯಾರ್ಥಿನಿ ಹಿಬಾ ಶೇಖ್ ಆರೋಪಿಸಿದ್ದಾರೆ.

ಈ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಜಾಬ್ ವಿವಾದದ ವೇಳೆ ಕಾಲೇಜಿಗೆ ಬಂದ ನಗರದ ಬಂದರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌  ವಿದ್ಯಾರ್ಥಿಗಳನ್ನುದ್ದೇಶಿಸಿ, ನಿಮ್ಮ ಲೈಫ್ ಸ್ಪಾಯಿಲ್ ಮಾಡುತ್ತೇನೆ. ಇನ್ನೂ ಇಲ್ಲೇ ಇದ್ದರೇ ಜೀವನವೂರ್ತಿ ಕಣ್ಣೀರಲ್ಲೇ ಕಾಲ ಕಳೆಯುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಹಿಬಾ ಶೇಖ್ ಆರೋಪಿಸಿದ್ದಾರೆ.

“ಮಂಗಳೂರಿನಲ್ಲಿ ಬೀಳಲಿದೆ ಮತ್ತೊಂದು ಹೆಣ” ಎಂದು ಪೋಸ್ಟ್; ಕರೆ ಮಾಡಿ ಜೀವಬೆದರಿಕೆ ಹಾಕಿದ ಕಿಡಿಗೇಡಿಗಳು

- Advertisement -

Related news

error: Content is protected !!