- Advertisement -
- Advertisement -
ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಹೈಕಮಾಂಡ್ ಗೆ ವರದಿ ಸಲ್ಲಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ಕಾಂಗ್ರೆಸ್ ಅಧ್ಯಕ್ಷೆಅ ಸೋನಿಯಾ ಗಾಂಧಿ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.
ಕೆ.ಜಿ.ಹಳ್ಳಿ ಗಲಭೆ ಕೇಸ್ ಗೆ ಸಂಬಂಧಿಸಿ ಕಾಂಗ್ರೆಸ್ ಕಾರ್ಪೊರೇಟರ್ ಬಂಧನ ಹಾಗೂ ನಾಯಕರ ಮೇಲಿರುವ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ತೆಗೆದುಕೊಳ್ಳಬೇಕಿರುವ ನಿಲುವಿನ ಬಗ್ಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಸಂಸದ ಡಿ.ಕೆ.ಸುರೇಶ್ ಕೂಡ ದೆಹಲಿಗೆ ತೆರಳಿದ್ದು, ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
- Advertisement -