- Advertisement -
- Advertisement -


ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಡುವೆ ಇರುವ ಫ್ಲೈ ಓವರ್ನ ಪಿಲ್ಲರ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಸುಟ್ಟು ಕರಕಲಾದ ಘಟನೆ ಮಂಡ್ಯದ ಮದ್ದೂರು ಪಟ್ಟಣದ ಎಲ್.ಐ.ಸಿ ಕಛೇರಿಯ ಮುಂಭಾಗದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.
ಬಿಡದಿಯಿಂದ ಮೈಸೂರಿಗೆ ಜಲ್ಲಿ ತುಂಬಿಕೊಂಡು ಟಿಪ್ಪರ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಫ್ಲೈ ಓವರ್ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾಗಿದೆ. ಇದರಿಂದ ಚಾಲಕ ವಾಹನದೊಳಗೆ ಸಿಲುಕಿ ಹೊರಬರಲಾಗದೇ ಟಿಪ್ಪರ್ನಲ್ಲೇ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಚಾಲಕನ ಶವವನ್ನು ಹೊರ ತೆಗೆದಿದ್ದಾರೆ.


- Advertisement -