- Advertisement -
- Advertisement -
ಕಡಬ: ಟಿಪ್ಪರ್ ಹಿಂಬದಿಗೆ ಬೈಕ್ ಒಂದು ಡಿಕ್ಕಿಯಾಗಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಗಡಿಪ್ಪಿಲ ಎಂಬಲ್ಲಿ ನಡೆದಿದೆ.
ಶಿವಪ್ರಸಾದ್ ಎಂಬವರು ಚಲಾಯಿಸಿಕೊಂಡು ಪುತ್ತೂರು ಕಡೆಗೆ ಬರುತ್ತಿದ್ದ ಟಿಪ್ಪರ್ನ ಹಿಂಬದಿಗೆ ಪುಣಚ ನಿವಾಸಿ ಶ್ರೀನಿಧಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀನಿಧಿ(29ವ.) ಅವರು ತೀವ್ರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಹ ಸವಾರೆಯಾಗಿದ್ದ ಅವರ ಪತ್ನಿ ವಿದ್ಯಾಲಕ್ಷ್ಮೀ(25ವ) ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಬಳ್ಪದಿಂದ ಪುಣಚಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -