ವಿಟ್ಲ: ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ್ದಾಳೆ. ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಹುಡುಗಿ ಸಾವನ್ನಪ್ಪಿದ್ದಾಳೆ, ಮೇಲ್ನೋಟಕ್ಕೆ ಆತ್ಮಹತ್ಯೆ ದಾಖಲಾಗಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ. ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ ಹಾಕಿಸಿ ಅವಳನ್ನು ಅವನ ಕುಟುಂಬದವರ ಸಹಕಾರದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಆ ಹುಡುಗಿಯ ಮನೆಯವರು ಆರೋಪಿಸಿದ್ದಾರೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯವಾಗಿದೆ ಎಂದು ಶರಣ್ ಪಂಪ್ವೆಲ್ ಕಿಡಿಕಾರಿದ್ದಾರೆ.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಮುಖರ ಜೊತೆ ಹುಡುಗಿಯ ಮನೆಗೆ ಹೋಗಿ ಮನೆಯವರಿಗೆ ಸಾಂತ್ವನ ಹೇಳಲಾಯಿತು. ಅಲ್ಲದೆ ಈ ಸಾವಿಗೆ ಕಾರಣವಾದ ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನು ಕೂಡಲೇ ಬಂಧಿಸಿ ಅವರ ಮೇಲೆ ಕೊಲೆ ಮೊಕ್ಕದ್ದಮೆ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಶರಣ್ ಪಂಪ್ ವೆಲ್ ಆಗ್ರಹಿಸಿದ್ದಾರೆ.
ಒಬ್ಬಳು ಪರಿಶಿಷ್ಟ ಪಂಗಡದ ಬಾಲಕಿ ಸಾಹುಲ್ ಹಮೀದ್ ನ ಬಲತ್ಕಾರದ ಕಾಮ ತೃಷೆಗೆ ಒಳಗಾಗಿ ಸಾವನ್ನಪ್ಪಿದ್ದು, ಇವಳ ಸಾವಿಗೆ ನ್ಯಾಯ ಸಿಗುವ ದೃಷ್ಠಿಯಿಂದ ಹೋರಾಟ ನಡೆಸಲು ವಿಶ್ವ ಹಿಂದೂ ಪರಿಷದ್ ಮುಂದಾಗಿದ್ದು, ಈ ಹೋರಾಟಕ್ಕೆ ದಲಿತ ಸಂಘಟನೆಗಳು ಧ್ವನಿ ಗೂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಸರಕಾರಕ್ಕೆ ಆಗ್ರಹಿಸೋಣ ಎಂದು ಶರಣ್ ಪಂಪ್ ವೆಲ್ ಹೇಳಿದ್ದರು. ಈ ಸಂದರ್ಭದಲ್ಲಿ ಕೃಷ್ಣಪ್ಪ ಕಲ್ಲಡ್ಕ ಜಿಲ್ಲಾ ಉಪಾಧ್ಯಕ್ಷರು ವಿ.ಹಿಂ.ಪ, ಪದ್ಮನಾಭ ಕಟ್ಟೆಅಧ್ಯಕ್ಷರು ವಿಹಿಂಪ, ಚಂದ್ರಹಾಸ ಕನ್ಯಾನ ಸಂಚಾಲಕರು ಭಜರಂಗದಳ ಉಪಸ್ಥಿತರಿದ್ದರು.