Monday, June 30, 2025
spot_imgspot_img
spot_imgspot_img

ಮುದ್ದು ಕಂದಮ್ಮಗಳೊಂದಿಗೆ ನೇಣಿಗೆ ಶರಣಾದ ತಾಯಿ

- Advertisement -
- Advertisement -

ಶಿವಮೊಗ್ಗ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿಯಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಜ್ಯೋತಿ(25), ಸಾನ್ವಿ (2) ಹಾಗೂ ಕುಶಾಲ್ (1) ಮೃತರು. ಜ್ಯೋತಿ ತನ್ನಿಬ್ಬರು ಮಕ್ಕಳಿಗೆ ನೇಣು ಬಿಗಿದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜ್ಯೋತಿ ಅವರಿಗೆ ಮದುವೆಯಾಗಿ ಐದು ವರ್ಷಗಳಾಗಿತ್ತು. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂಸಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!