- Advertisement -
- Advertisement -
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ವಿಚಾರದ ವಿವಾದ ಇಂದೂ ಮುಂದುವರಿದ ಘಟನೆ ನಡೆದಿದೆ.
ಇಂದೂ ಕೂಡಾ ಹನ್ನೆರಡು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜು ಕ್ಯಾಂಪಸ್ ಗೆ ಬಂದಿದ್ದಾರೆ. ನಂತರ ಹಿಜಾಬ್ ಧರಿಸಿ ಬಂದಿದ್ದ ಹನ್ನೆರಡು ವಿದ್ಯಾರ್ಥಿನಿಯರು ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದಾರೆ. ಬುರ್ಖಾ ಮತ್ತು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಹಲವು ವಿದ್ಯಾರ್ಥಿನಿಯರು ಬುರ್ಖಾ ಮತ್ತು ಹಿಜಾಬ್ ತೆಗೆದಿರಿಸಿ ತರಗತಿಗಳಿಗೆ ಹಾಜರಾಗಿದ್ದಾರೆ.
ಸದ್ಯ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯಾರ್ಥಿನಿಯರು ಡಿಸಿ ಡಾ. ರಾಜೇಂದ್ರ ಅವರನ್ನು ಭೇಟಿ ಮಾಡಲು ಕಾಯುತ್ತಿದ್ದಾರೆ.
- Advertisement -