- Advertisement -
- Advertisement -


ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅಡುಗೆಯ ಸಾಂಬಾರ್ ಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.
ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ ಮಾಡಿಕೊಂಡಿರುವಾಗ, ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿ ಇಟ್ಟಿದ್ದ ಸಾಂಬಾರ್ ಪಾತ್ರಗೆ ಕಾಲು ಜಾರಿ ಬಿದ್ದ ಪರಿಣಾಮ ಪಾತ್ರೆಯಲ್ಲಿದ್ದ ಬಿಸಿ ಬಿಸಿ ಸಾಂಬಾರ್ ಪ್ರಮೀಳಾ ಮೈ ಮೇಲೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪುತ್ತೂರು: ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
- ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್ಯಕ್ರಮ
- ಕತಾರ್ ನ ನೈಸರ್ಗಿಕ ಅನಿಲ ಕೇಂದ್ರದಲ್ಲಿ ಭಾರೀ ಸ್ಫೋಟ – 54 ಮಂದಿಗೆ ಗಾಯ, 18 ಮಂದಿ ನಾಪತ್ತೆ
- ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಕಚ್ಚುತ್ತಿದ್ದಂತೆ ಭೀಕರ ಸ್ಫೋಟ – ಸಾಕುನಾಯಿ ಸಾವು
- ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿ


- Advertisement -








