- Advertisement -
- Advertisement -


ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅಡುಗೆಯ ಸಾಂಬಾರ್ ಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.
ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ ಮಾಡಿಕೊಂಡಿರುವಾಗ, ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿ ಇಟ್ಟಿದ್ದ ಸಾಂಬಾರ್ ಪಾತ್ರಗೆ ಕಾಲು ಜಾರಿ ಬಿದ್ದ ಪರಿಣಾಮ ಪಾತ್ರೆಯಲ್ಲಿದ್ದ ಬಿಸಿ ಬಿಸಿ ಸಾಂಬಾರ್ ಪ್ರಮೀಳಾ ಮೈ ಮೇಲೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಕೋಗಿಲು ಬಡಾವಣೆ ನಿರಾಶ್ರಿತರ ದಾಖಲೆಗಳು ಕಾನೂನುಬದ್ಧವಾಗಿಲ್ಲ; ಹೈಕೋರ್ಟ್ಗೆ ಸರಕಾರದ ಮಾಹಿತಿ
- ಭೂಸ್ವಾಧೀನ ಪರಿಹಾರ ಘೋಷಣೆಗೂ ಮುನ್ನ ಒಕ್ಕಲೆಬ್ಬಿಸುವುದಿಲ್ಲ: ಹೈಕೋರ್ಟ್ಗೆ ಸರ್ಕಾರ
- ಕರ್ನಾಟಕದಲ್ಲಿ 3 ತಿಂಗಳಲ್ಲಿ 1 ಸಾವಿರ ಅಕ್ರಮ ವಲಸಿಗರು ಪತ್ತೆ: ಪ್ರಿಯಾಂಕ್ ಖರ್ಗೆ
- ಜಾತಿ ನಿಂದನೆ, ಕತ್ತಿಯಿಂದ ಹಲ್ಲೆಗೆ ಯತ್ನ ಆರೋಪ: 16 ವರ್ಷದ ಬಾಲಕನ ದೂರಿನ ಮೇರೆಗೆ ಅಟ್ರಾಸಿಟಿ ಕೇಸ್
- ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸೈನಿಕನ ಕುಟುಂಬಕ್ಕೆ ರಕ್ಷಣೆ ಕೋರಿ ಸೇನೆಯಿಂದ ಸಿಎಂ, ಗೃಹ ಸಚಿವರಿಗೆ ಪತ್ರ


- Advertisement -








