- Advertisement -
- Advertisement -
ಕಾಸರಗೋಡು: ಗುಂಡೇಟು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ.
ಕರಿಚ್ಚೇರಿ ಯ ಮಾಧವನ್ (65) ಮೃತಪಟ್ಟವರು. ಹಲಸು ಕೊಯ್ಯಲು ಹಿತ್ತಿಲಿಗೆ ತೆರಳಿದ್ದ ಮಾಧವನ್ ರವರು ನೆಲದಲ್ಲಿಟ್ಟಿದ್ದ ಕೋವಿಯನ್ನು ಮೆಟ್ಟಿದಾಗ ಗುಂಡು ಕಾಲಿಗೆ ತಗಲಿದೆ.
ಕಾಡುಹಂದಿಗೆ ಗುರಿ ಇಟ್ಟು ಈ ಕೋವಿಯನ್ನು ಪರಿಸರವಾಸಿಯೊಬ್ಬರು ಹಿತ್ತಿಲಿನಲ್ಲಿ ತಂದಿಟ್ಟಿದ್ದರು ಎನ್ನಲಾಗಿದೆ. ಘಟನೆ ನಡೆದ ಗಂಟೆಗಳ ಬಳಿಕ ಇದು ಮನೆಯವರ ಗಮನಕ್ಕೆ ಬಂದಿದೆ . ಕೂಡಲೇ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ . ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- ಚಾಕುವಿನಿಂದ ಇರಿದು ಯುವಕನ ಕೊಲೆಗೈದ ದುಷ್ಕರ್ಮಿಗಳು..!
- ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು..!
- ಕರಾವಳಿಯಲ್ಲಿ ಮೇ. 19 ರವರೆಗೆ ಎಲ್ಲೋ ಅಲರ್ಟ್..!
- ಲಾರಿಗೆ ಢಿಕ್ಕಿ ಹೊಡೆದ ಬಸ್; 4 ಸಾವು, 15ಕ್ಕೂ ಅಧಿತ ಮಂದಿ ಗಾಯ..!
- ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ..!
- Advertisement -