- Advertisement -
- Advertisement -


ಮಂಗಳೂರು: ಬೈಕಂಪಾಡಿಯ ಮೀನಕಳಿಯಲ್ಲಿ ರೌಡಿಶೀಟರ್ ಟ್ಯಾಟೂ ರಾಜಾ ಅಲಿಯಾಸ್ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಯಾನೆ ಮೈಕಲ್ ನವೀನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈಗ ಬಂಧಿಸಿದ ಆರೋಪಿಗಳ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಮೈಕಲ್ ನವೀನ್ ಎಂಬಾತನ ಮೇಲೆ ಈಗಾಗಲೇ ಮೂರು ಕೊಲೆ ಪ್ರಕರಣ ಸೇರಿದಂತೆ ಒಟ್ಟು 8 ಕ್ರಿಮಿನಲ್ ಕೇಸುಗಳಿವೆ. ಟ್ಯಾಟೂ ರಾಜಾನ ಕೊಲೆಗೆ ಪ್ರಮುಖ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.
ಇದಕ್ಕೂ ಮುಂಚೆ ಎರಡು ಆರೋಪಿಗಳನ ಮೂಲಕ ಮೂಲ್ಕಿ ಎಂಬಲ್ಲಿ ಇತರರನ್ನು ಬಂಧಿಸಲು ಹೋದಾಗ ಆರೋಪಿಗಳನ್ನು ಪೊಲೀಸರ ಮೇಲೆ ಹಲ್ಲೆಗೈದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದರು.
- ಮಾನ್ಯತೆ ರದ್ದಾದ ಕೋಡ್ನಲ್ಲಿ ದಾಖಲಾತಿ ಇಲ್ಲ – ರದ್ದತಿಗೆ ನಾವೇ ಅರ್ಜಿ ಸಲ್ಲಿಸಿದ್ದೆವು: ಎಕ್ಸೆಲ್ ಕಾಲೇಜು ಸ್ಪಷ್ಟನೆ
- ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ಗೆ ಒತ್ತಾಯ; ಎಸ್ಐಟಿಗೆ ಗಿರೀಶ್ ಮಟ್ಟಣ್ಣವರ್ ದೂರು
- ಭಾರತದ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ
- ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸ್ಕಿಡ್ – ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ತಾಯಿ ಸಾವು
- ಅಸ್ಸಾಂನ ಜೋರ್ಹತ್ನಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಪತನ; ಐವರು IAF ಸಿಬ್ಬಂದಿ ದುರ್ಮರಣ


- Advertisement -








