Saturday, June 28, 2025
spot_imgspot_img
spot_imgspot_img

ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು- ಯು.ಟಿ.ಖಾದರ್

- Advertisement -
- Advertisement -

ಮಂಗಳೂರು:- ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿಲ್ಲ, ಹೀಗಾಗಿ ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು ಎಂದು ಮಾಜಿ ಆರೋಗ್ಯ ಸಚಿವ,ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ‌ ಮಾತನಾಡಿದ ಅವರು ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಉಚಿತ ಚಿಕಿತ್ಸೆ ಸಿಗುತ್ತಿಲ್ಲ, ಅವರೆಲ್ಲರ ಹಣವನ್ನು ಮರು ಪಾವತಿಸಲು ಸಿಎಂ ಪರಿಹಾರ ನಿಧಿಯಿಂದ ತಕ್ಷಣ ಹಣ ಬಿಡುಗಡೆ ಮಾಡಬೇಕು.ಆಗ ಆಸ್ಪತ್ರೆಗಳು ಎಷ್ಟು ಬಿಲ್‌ ಮಾಡಿದೆ ಅನ್ನೋದು ಸರ್ಕಾರಕ್ಕೆ ಗೊತ್ತಾಗುತ್ತದೆ. ಸರ್ಕಾರ ಈ ಬಗ್ಗೆ ತಕ್ಷಣ ಕಾರ್ಯ ಪ್ರವೃತವಾಗಬೇಕೆಂದು ಅವರು ಒತ್ತಾಯಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೋನಾ ಪಾಸಿಟಿವ್ ಹಾಗೂ ಕೊರೋನಾದಿಂದ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ, ಆದ್ರೂ ಎಲ್ಲೆಡೆ ಲಾಕ್ ಡೌನ್ ಸಡಿಲಿಸಿದ್ದಾರೆ. ಇತ್ತೀಚೆಗೆ ಕೊರೋನಾ ಟೆಸ್ಟಿಂಗ್ ಕೂಡಾ ಕಡಿಮೆ ಮಾಡಿದ್ದಾರೆ.ಬೀದಿ ವ್ಯಾಪಾರಿಗಳು,ಇತರೆ ಎಲ್ಲಾ ರೀತಿಯ ವ್ಯಾಪಾರಿಗಳು, ಲಾರಿ, ಬಸ್ಸ್ ಚಾಲಕರಿಗೆ ಕೊರೋನಾ ರಿಪೋರ್ಟ್ ತರಲು ಆದೇಶಿಸಿ, ಆಗ ಎಲ್ಲರೂ ತಪಾಸಣೆ ಮಾಡ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.

- Advertisement -

Related news

error: Content is protected !!