Sunday, June 29, 2025
spot_imgspot_img
spot_imgspot_img

ವಿಟ್ಲ: ಸಂಘಟನೆಯ ಇತ್ತಂಡಗಳ ನಡುವೆ ಮಾರಾಮಾರಿ; ಬಂಧಿತರ ಸಂಖ್ಯೆ 4ಕ್ಕೆ ಏರಿಕೆ – ರೌಡಿಶೀಟರ್ ಪ್ರಶಾಂತ್ ಅಲಿಯಾಸ್ ಪಚ್ಚು ಸ್ಥಿತಿ ಚಿಂತಾಜನಕ..! ಪೊಲೀಸ್ ಕಸ್ಟಡಿಯಲ್ಲಿ ಚಿಕಿತ್ಸೆ

- Advertisement -
- Advertisement -

ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಓರ್ವನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಮತ್ತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಇತ್ತಂಡಗಳೂ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಶಶಿಕುಮಾರ್ ಎಂಬಾತನನ್ನು ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.

ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ..!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಗಳನ್ನು ವಿನೀತ್‌, ಗಣೇಶ್‌, ದಿನೇಶ್‌ ಎನ್ನಲಾಗಿದೆ. ಪ್ರಶಾಂತ್‌ ಅಲಿಯಾಸ್‌ ಪಚ್ಚು ಅವರ ಗುಂಪಿನಲ್ಲಿ ಇವರು ಇದ್ದರು ಎನ್ನಲಾಗಿದೆ.

ಪ್ರಶಾಂತ್‌ ಗೆ ಹಲ್ಲೆ ನಡೆಸಿದ ಪ್ರಮುಖ ಆರೋಪಿ ಚಂದ್ರಹಾಸ ಕನ್ಯಾನ ಪರಾರಿಯಾಗಿದ್ದಾರೆ. ಚಂದ್ರಹಾಸ ಕನ್ಯಾನ ಮತ್ತು ಸಹಚರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ರೌಡಿಶೀಟರ್‌ ಪ್ರಶಾಂತ್ ಅಲಿಯಾಸ್ ಪಚ್ಚು ಸ್ಥಿತಿ ಚಿಂತಾಜನಕ.! ಪ್ರಶಾಂತ್‌ನ ಹಿನ್ನಲೆಯೇನು?
ಪ್ರಶಾಂತ್ ಸ್ಥಿತಿ ಚಿಂತಾಜನಕವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಅಧೀನದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಪ್ರಶಾಂತ್ ಈ ಹಿಂದೆ ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಅಬ್ದುಲ್‌ ಜಲೀಲ್‌ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ಅಂತೆಯೇ ಪಿಂಕಿ ನವಾಜ್‌ನನ್ನು ಕಾಟಿಪಳ್ಳದ ೨ನೇ ಬ್ಲಾಕ್‌ನಲ್ಲಿರುವ ಟಿಕ್‌ಟಾಕ್ ಗಾರ್ಡನ್ ಬಳಿ ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಂಡ ಮಾರಕಾಸ್ತ್ರದಿಂದ ಅಟ್ಟಾಡಿಸಿ ಕೊಲೆಗೆ ಯತ್ನಿಸಿದ್ದರು. ಈ ತಂಡದಲ್ಲಿ ಪ್ರಶಾಂತ್ ಕೂಡ ಭಾಗಿಯಾಗಿದ್ದ. ಮತ್ತು ಪೊಲೀಸರು ಈತನನ್ನು ಬಂಧಿಸಿದ್ದರು.

- Advertisement -

Related news

error: Content is protected !!