ಮಂಗಳೂರು:-ಅಕ್ರಮ ಆಸ್ತಿ ಪ್ರಕರಣ ಸಂಬಂಧಿಸಿದಂತೆ ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿ ಮೇಲೆ ಆರೋಪ ಸಾಬೀತು ಆಗಿದೆ.
ದಿನಾಂಕ 27-08-2009 ರಂದು ಬೆಳ್ತಂಗಡಿ ಯಲ್ಲಿ ಪೋಲಿಸ್ ವೃತ್ತ ನಿರೀಕ್ಷಕರಾಗಿದ್ದ ಸಂದರ್ಬದಲ್ಲಿ ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶ ಪಡಿಸಿಕೊಂಡಿದ್ದರು. ಸುಮಾರು ಹತ್ತೊಂಬತ್ತು ಲಕ್ಷದಸ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿ.ವೈ. ಎಸ್.ಪಿ. ಆಗಿದ್ದ ಎಮ್. ವಿಟ್ಟಲ್ ದಾಸ್ ಪೈ ಆರೋಪಿ ಗಂಗಿ ರೆಡ್ಡಿ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರು ಬಿ.ಬಿ.ಜಕಾತಿ ಆಪರಾಧಿಗೆ 4 ವರ್ಷ ಸಾದಾ ಸಜೆ ಮತ್ತು ರೂ 5,00,000/-ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ಎಂದು ಪ್ರಕಟಿಸಿದ್ದಾರೆ. ಅಪರಾಧಿ ಗಂಗಿ ರೆಡ್ಡಿ ನ್ಯಾಯಾಂಗ ಬಂದನಕ್ಕೆ.
ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.