- Advertisement -
- Advertisement -


ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ.
ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು ವಾಸವಿದ್ದರು. ಬೇಬಿ(60) ಕೊಲೆಯಾದ ದುರ್ದೈವಿ. ಪತ್ನಿ ನೆಲ್ಲಮ್ಮ(55) ಆರೋಪಿ. ಕೊಲೆಯಾದ ಬಳಿಕ ಪತಿ ಬಳಿ ಪತ್ನಿ ಕತ್ತಿ ಹಿಡಿದು ಕುಳಿತಿದ್ದರು.

ಕೃಷಿಕ ದಂಪತಿಯಾಗಿರುವ ಇವರಿಗೆ ಮೂವರು ಮಕ್ಕಳಿದ್ದು, ಪುತ್ರಿಗೆ ವಿವಾಹವಾಗಿದ್ದು, ಓರ್ವ ಪುತ್ರ ವಿದೇಶದಲ್ಲಿ, ಮತ್ತೋರ್ವ ಪುತ್ರ ಬೇರೆಡೆ ವಾಸವಾಗಿದ್ದಾರೆ. ಮನೆಯಲ್ಲಿ ಇಬ್ಬರೇ ಇದ್ದರು ಎಂದು ತಿಳಿದುಬಂದಿದೆ.
ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಯಾವುದೋ ಕಾರಣಕ್ಕೆ ಪತಿಯನ್ನು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಬಾಕಿ ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ; ಜೂ.21 ರಿಂದ ಜುಲೈ 10ರವರೆಗೆ ಅವಕಾಶ
- ಶ್ರೀ ದುರ್ಗಾ ಕಲಾತಂಡದ ಹೊಸ ನಾಟಕ ‘ಕಾಲ ಭೈರವಿ’ ಬಿಡುಗಡೆ
- ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!
- ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು, ಪ್ರಕರಣ ದಾಖಲು
- ಮಂಗಳೂರು: ಎಕ್ಕೂರು ಹೆದ್ದಾರಿಯಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು!


- Advertisement -








