Saturday, June 28, 2025
spot_imgspot_img
spot_imgspot_img

ಉಡುಪಿ: ಸೋಮನಾಥನ ಸನ್ನಿಧಿಗೆ ಕನ್ನ ಹಾಕಿದ ಚೋರರು; ಬಲಿ ಮೂರ್ತಿ ಸೇರಿದಂತೆ ಲಕ್ಷಾಂತರ ನಗದು ಕಳವು

- Advertisement -
- Advertisement -

ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ದೂಳ ಗ್ರಾಮದ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನಕ್ಕೆ ರವಿವಾರ ರಾತ್ರಿ ಕಳ್ಳರು ನುಗ್ಗಿದ್ದು, ಪಂಚಲೋಹದ ಬಲಿ ಮೂರ್ತಿ ಸೇರಿದಂತೆ ಲಕ್ಷಾಂತರ ರೂ ವಸ್ತುಗಳನ್ನು ಕಳವುಗೈದಿದ್ದಾರೆ.

ಇಂದು ಬೆಳಗ್ಗೆ ಆರು ಗಂಟೆಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕಳ್ಳತನದ ವಿಚಾರ ಬೆಳಕಿಗೆ ಬಂದಿದೆ. ದೇವಸ್ಥಾನದ ಹಿಂಬದಿ ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ಬೆಲೆಬಾಳುವ ಪಂಚಲೋಹದ ಬಲಿ ಮೂರ್ತಿ, ಹುಂಡಿಯಲ್ಲಿದ್ದ ಅಂದಾಜು 1.5 ಲಕ್ಷ ರೂ. ಕಳ್ಳತನವಾಗಿದೆ, ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನ ನಡೆಸಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಲಾಕರ್ ರೂಂ ಪ್ರವೇಶ ಮಾಡಿದ ಕಳ್ಳರು ಲಾಕರ್ ಒಡೆಯಲು ವಿಫಲ ಪ್ರಯತ್ನ ನಡೆಸಿದ್ದಾರೆ. ದೇವಸ್ಥಾನದ ಸಿಸಿ ಕ್ಯಾಮರಾದ ಡಿವಿಆರ್ ನ ಕಳ್ಳರು ಹೊತ್ತೂಯ್ದಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು, ವೃತ್ತ ನಿರೀಕ್ಷಕರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.

- Advertisement -

Related news

error: Content is protected !!