Saturday, June 28, 2025
spot_imgspot_img
spot_imgspot_img

ಮುಲ್ಕಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ.

- Advertisement -
- Advertisement -

ಮುಲ್ಕಿ: ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ  ಮುಲ್ಕಿ ಸಮೀಪದ ಕೊಲಕಾಡಿ ಎಂಬಲ್ಲಿ ನಡೆದಿದೆ. ಕೊಲಕಾಡಿ ನಿವಾಸಿ ರತ್ನಾಕರ್ ಆಚಾರ್ಯ ಎಂಬುವವರ ಪತ್ನಿ ಶಶಿ ಆರ್.ಆಚಾರ್ಯ (55) ಮೃತ ಮಹಿಳೆಯಾಗಿದ್ದಾರೆ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು‌. ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಆಪದ್ಬಾಂಧವ ಆಸಿಫ್ ನೇತೃತ್ವದ ಕಾರ್ನಾಡು ಮೈಮುನಾ ಫೌಂಡೇಶನ್ ಸಿಬ್ಬಂದಿ ಮುಸ್ತಕ್ ಮತ್ತು ದಾವೂದ್ ಮೃತ ದೇಹವನ್ನು ಬಾವಿಯಿಂದ ಹೊರ ತೆಗೆದರು. ಮುಲ್ಕಿ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!