- Advertisement -
- Advertisement -
ನಗರದ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ತಂಡ ತನಿಖೆ ಮುಂದುವರಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಈ ವೇಳೆ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಸೂಚನೆ ನೀಡಲಾಗಿದೆ.
ನಗರದ ಹಲವಾರು ಕಡೆ ಸಿಸಿಬಿ ತಂಡ ರೇಡ್ ಮಾಡಿದೆ. ಈಗಾಗಲೇ ಹಲವಾರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ತಂಡ ಪ್ರಕರಣದ ತನಿಖೆಯನ್ನು ಮುಂದುವರಿಸುತ್ತದೆ. ಬೇರೆ ಎಸ್ ಐಟಿ ರಚನೆ ಮಾಡುವುದಿಲ್ಲ ಎಂದು ಹೇಳಿದರು.
- Advertisement -