Tuesday, April 30, 2024
spot_imgspot_img
spot_imgspot_img

ವಿಟ್ಲ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್ ಟಿ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ಮಂಜುನಾಥ್ ಟಿ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆಗೊಳಿಸುವಂತೆ ದೇವಜ್ಯೋತಿ ರೇ, ಪೊಲೀಸ್‌ ಮಹಾನಿರೀಕ್ಷಕರು ಪಶ್ಚಿಮ ವಲಯ ಮಂಗಳೂರು ಇವರು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಬೆಳ್ಳಾರೆಯಲ್ಲಿ ಎಸೈ ಆಗಿದ್ದ ರುಕ್ಮ ನಾಯ್ಕ್ , ಸುಬ್ರ ಹ್ಮಣ್ಯ ಎಸೈ ಆಗಿದ್ದ ಜಂಬೂರಾಜ್ ಮಹಾಜನ್ ಅವರನ್ನು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ವಿಟ್ಲ ಪೊಲೀಸ್ ಠಾಣೆಗೆ ಧನಂಜಯ ಡಿ. ಹೆಚ್
ಚಿಕ್ಕಮಗಳೂರು ಯುಗಟಿ ಠಾಣೆಯ ಪಿಎಸ್ಐ ಧನಂಜಯ ಡಿ. ಹೆಚ್. ಅವರನ್ನು ವಿಟ್ಲ ಠಾಣೆಗೆ ವರ್ಗಾವಣೆಗೊಳಿ ಆದೇಶಿಲಾಗಿದೆ.

ಬೆಳ್ಳಾರೆ ಠಾಣೆಗೆ ಸುಹಾಸ್ ಆರ್ ನಿಯುಕ್ತಿ
ಅಮಾನತುಗೊಂಡ ಬೆಳ್ಳಾರೆ ಪೊಲೀಸ್ ಠಾಣೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಹಾರ್‌ ಆರ್‌ ನಿಯುಕ್ತಿಗೊಂಡಿದ್ದಾರೆ.

ಪ್ರವೀಣ್ ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್.ಎಸ್. ಎಸ್. ನ ಹಿರಿಯ ಕಾರ್ಯಕರ್ತ ರಮೇಶ್‌ ಅವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದರು. ಈ ಹಿನ್ನೆಲೆ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಕೂಗು ಕೇಳಿಬಂದಿತ್ತು ಈ ಹಿನ್ನೆಲೆ ಅಮಾನತುಗೊಳಿಸಿ ಅವರ ಸ್ಥಾನಕ್ಕೆ ಇತರ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

- Advertisement -

Related news

error: Content is protected !!