- Advertisement -
- Advertisement -


ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 7ವರ್ಷದ ಬಾಲಕಿ ಮರದ ಕಾಲುಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.

ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಏಳು ವರ್ಷದ ಪುತ್ರಿ ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.

ಸ.ಹಿ.ಪ್ರಾ.ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಶಾಲೆ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದ ವೇಳೆ ದಾರಿ ಮಧ್ಯೆಯ ಮರದ ಕಾಲು ಸಂಕ ದಾಟುತ್ತಿದ್ದಾಗ ರಭಸದಿಂದ ಹರಿಯುತ್ತಿದ್ದ ಹೊಳೆಗೆ ಬಿದ್ದಿದ್ದಾಳೆ. ಸದ್ಯ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಊರವರ ಹುಡುಕಾಟ ಮುಂದುವರಿದಿದೆ.


- Advertisement -