Sunday, June 29, 2025
spot_imgspot_img
spot_imgspot_img

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿವೈಎಸ್‌ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಇಂದು ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹತ್ಯೆ ಘಟನೆಗೆ ಸಂಬಂಧಿಸಿ ಆರೋಪಿಗಳಾದ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ ಮತ್ತು ಸುಳ್ಯ ನಾವೂರು ನಿವಾಸಿ ಆಬಿದ್ ಎಂಬವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು.

ಇಂದು ಬೆಳಿಗ್ಗೆ ಇವರನ್ನು ಸುಳ್ಯ ಮತ್ತು ಬೆಳ್ಳಾರೆಯ ಎಸ್‌ಡಿಪಿಐ ಕಚೇರಿಗೆ ಹಾಗೂ ಸುಳ್ಯ ಮತ್ತು ಬೆಳ್ಳಾರೆಯ ಕೆಲವು ಕಡೆಗಳಲ್ಲಿ ಮಹಜರು ನಡೆಸಿ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕಿರಿಯ ಸಿವಿಲ್ ನ್ಯಾಯಾಧೀಶೆ ಕು. ಅರ್ಪಿತಾರವರು ಆರೋಪಿಗಳಿಗೆ ಇಂದಿನಿಂದ ಆಗಸ್ಟ್ 12 ರವರೆಗೆ ನಾಲ್ಕು ದಿನಗಳ ನ್ಯಾಯಾಂಗಬಂಧನ ಆದೇಶ ನೀಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!