Tuesday, April 30, 2024
spot_imgspot_img
spot_imgspot_img

ವಿಟ್ಲ: ಹಲವು ಪ್ರಕರಣದ ಆರೋಪಿಯ ಸ್ಮರಣಾರ್ಥ ಸರಕಾರಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ.! ಜನರ ಆಕ್ರೋಶ.?

- Advertisement -G L Acharya panikkar
- Advertisement -

ವಿಟ್ಲ: ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯ ಸ್ಮರಣಾರ್ಥ ಸರಕಾರಿ ಶಾಲೆಗಳಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕರೋಪಾಡಿ ಗ್ರಾಮದಲ್ಲಿ ಕ್ರಿಮಿನಲ್ ಚಟುವಟಿಕೆ, ದರೋಡೆ, ಗಾಂಜಾ, ರಕ್ತಚಂದನ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ಅನ್ವರ್ ಮುಗುಳಿ ಎಂಬ ವ್ಯಕ್ತಿಯ ಸ್ಮರಣಾರ್ಥ ಮಿತ್ತನಡ್ಕ ಸರಕಾರಿ ಶಾಲೆಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡವ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಈತನು ಕರ್ನಾಟಕದಿಂದ ಕೇರಳಕ್ಕೆ ಹೋಗುವ ಲಾರಿಗಳನ್ನು ಗಡಿಭಾಗದಲ್ಲಿ ನಿಲ್ಲಿಸಿ ಹಫ್ತಾ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪವು ಇದೆ. ಕಳೆದ ವರ್ಷ ಈತನು ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅನ್ವರ್ ಮುಗುಳಿ ಕ್ರಿಮಿನಲ್ ಹಿನ್ನಲೆ ಹೊಂದಿದ್ದು, ಈತನ ಸವಿನೆನಪಿಗಾಗಿ ಸರಕಾರಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಹಲವರ ಅಭಿಪ್ರಾಯವಾಗಿದೆ. ಈ ಕಾರ್ಯಕ್ರಮ ಶಾಲೆಯಲ್ಲಿ ನಡೆಯಲು ಅವಕಾಶ ನೀಡಬಾರದು ಎನ್ನುವ ಮಾತು ಸಾರ್ವಜಿನಿಕ ವಲಯದಿಂದ ಕೇಳಿ ಬಂದಿದೆ.

- Advertisement -

Related news

error: Content is protected !!