- Advertisement -
- Advertisement -
ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಪರ ವಕೀಲರು ಇಂದು ಸಿಸಿಬಿ ಅಧಿಕಾರಿಗಳನ್ನು ಭೇಟಿ ಮಾಡಿ ವಿಚಾರಣೆಗೆ ಕಾಲಾವಕಾಶ ಕೋರಿದ್ದಾರೆ. ನಟಿ ರಾಗಿಣಿ ಅವರಿಗೆ ಅನಾರೋಗ್ಯವಿರುವ ಕಾರಣ ಒಂದೆರಡು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದಕ್ಕೆ ಪ್ರತಿಕ್ರಿಯಿಸಿ ಸಿಸಿಬಿ ಅಧಿಕಾರಿಗಳು , ನಾವು ಕಳುಹಿಸಿದ ನೋಟಿಸ್ ಗೆ ರಾಗಿಣಿ ಸ್ಪಂದಿಸಿಲ್ಲ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿ ಎಂದು ವಕೀಲರ ಬಳಿ ಹೇಳಿದ್ದಾರೆ ಅಂತ ತಿಳಿದುಬಂದಿದೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿ ರವಿಶಂಕರ್ ಎಂಬಾತನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ನೀಡಿದ ಹೇಳಿಕೆ ಆಧಾರದ ಮೇಲೆ ಇಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು.
- Advertisement -