Sunday, June 29, 2025
spot_imgspot_img
spot_imgspot_img

ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ವಿಧಿವಶ.

- Advertisement -
- Advertisement -

ಕಾಸರಗೋಡು:- ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ರಾತ್ರಿ 12.45ರ ಸುಮಾರಿಗೆ ಇಹಲೋಕ ತ್ಯಜಿಸಿದರು.

ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.

ಮಠದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಶ್ರೀಗಳು ಹರಿಕಥೆಯನ್ನೂ ಮಾಡುತ್ತಿದ್ದರು. ಕರಾವಳಿಯ ಪ್ರಸಿದ್ದ ಯಕ್ಷಗಾನದ ಮೇಲೆ ವಿಶೇಷ ಒಲವಿದ್ದ ಶ್ರೀಗಳು, ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು.

- Advertisement -

Related news

error: Content is protected !!