- Advertisement -
- Advertisement -
ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.
ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ.
ಮೇಯರ್ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಖಚಿತವಾಗಿರುವುದರಿಂದ ಜಯಾನಂದ ಮತ್ತು ಪೂರ್ಣಿಮಾ ಆಯ್ಕೆಯಾಗಲಿದ್ದಾರೆ.
- Advertisement -